• HOME
  • INTERNATIONAL
  • TECHNOLOGY
  • LIFESTYLE
  • POLITICS
  • WEEKLY NEWS
  • BUSINESS
  • SPORTS
  • HEALTH
  • LINK
    • GOOGLEPLUS.COM
  • GOOGLEPLUS.COM
  • LOGIN
  • REGISTRATION
  • CONTACT
  • DJ DJ DJ DJ DJ
  • Provides the Best Software Development Service at reasonable price around the world
  • Flood victims in north find it hard to save or sell their livestock
  • blanditiis praesentium voluptatum deleniti atque corrupti
  • printer took a galley of type and scrambled it
Saturday, 25 July 2026 LIVE
ePaper Contact
Jatayu Newspaper

Trusted Kannada Digital Newspaper

No icon

ಅಬಕಾರಿ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬ್ರಹ್ಮಾಂಡ ಭ್ರಷ್ಟಾಚಾರ! ಆರ್. ಅಶೋಕ್ ಕಿಡಿ

ಅಬಕಾರಿ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬ್ರಹ್ಮಾಂಡ ಭ್ರಷ್ಟಾಚಾರ! ಆರ್. ಅಶೋಕ್ ಕಿಡಿ

  • By Netra --
  • Tuesday, 20 Jan, 2026

​​​​​​ಅಧಿಕಾರಿಗಳ ವರ್ಗಾವಣೆಯಿಂದ ಹಿಡಿದು, ಮದ್ಯದಂಗಡಿಗಳ ಲೈಸೆನ್ಸ್ ಮಂಜೂರಾತಿಯವರೆಗೆ ಪ್ರತಿಯೊಂದಕ್ಕೂ ಇಲ್ಲಿ ಲಂಚದ ಮುದ್ರೆ ಅನಿವಾರ್ಯವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್

ಬೆಂಗಳೂರು: ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಈ ಕುರಿತ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಆರ್. ಅಶೋಕ್, ಅಧಿಕಾರಿಗಳ ವರ್ಗಾವಣೆಯಿಂದ ಹಿಡಿದು, ಮದ್ಯದಂಗಡಿಗಳ ಲೈಸೆನ್ಸ್ ಮಂಜೂರಾತಿಯವರೆಗೆ ಪ್ರತಿಯೊಂದಕ್ಕೂ ಇಲ್ಲಿ ಲಂಚದ ಮುದ್ರೆ ಅನಿವಾರ್ಯವಾಗಿದೆ. ಲಂಚ ನೀಡದೆ ಒಂದು ಕಡತವೂ ಕದಲುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿರುವುದು ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ.

ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ ₹2,500 ಕೋಟಿ ರೂಪಾಯಿಗಳ ಬೃಹತ್ ಹಗರಣ ಎಂಬ ಆರೋಪಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಈ ಕುರಿತು ರಾಜ್ಯ ಮದ್ಯ ಮಾರಾಟಗಾರರ ಸಂಘವೇ ಈ ಬಗ್ಗೆ ಲಿಖಿತ ದೂರು ನೀಡಿರುವುದು, "ಕೈಬೆಚ್ಚಗೆ ಮಾಡದಿದ್ದರೆ ಸುಳ್ಳು ಕೇಸ್ ಹಾಕಿ ಟಾರ್ಗೆಟ್ ಮಾಡಲಾಗುತ್ತದೆ" ಎಂದು ಬಾರ್ ಮಾಲೀಕರೊಬ್ಬರು ಲೋಕಾಯುಕ್ತದ ಮೆಟ್ಟಿಲೇರಿರುವುದು ಇಲಾಖೆಯ ಕರ್ಮಕಾಂಡಕ್ಕೆ ಸ್ಪಷ್ಟ ಸಾಕ್ಷಿಗಳಾಗಿವೆ. ಇಷ್ಟಾದರೂ ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದೀರಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ಲವೇ? ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಬ್ರಹ್ಮಾಂಡ ಭ್ರಷ್ಟಾಚಾರದ ಹಣ ಯಾರ ಕಿಸೆ ಸೇರುತ್ತಿದೆ ಎಂಬುದಕ್ಕೆ ಉತ್ತರವಿಲ್ಲದಿದ್ದರೂ, ಮುಖ್ಯಮಂತ್ರಿಗಳ, ಸಚಿವರ ಆಶೀರ್ವಾದವಿಲ್ಲದೆ ಈ ಸುಲಿಗೆ ಸಾಧ್ಯವೇ ಎಂಬ ಪ್ರಶ್ನೆ ಮೂಡುವುದು ಸಹಜ. ಯಾವಾಗಲೂ "ನನ್ನದು ತೆರೆದ ಪುಸ್ತಕ" ಎಂದು ಬಡಾಯಿ ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಇಷ್ಟೊಂದು ಗಂಭೀರ ಆರೋಪಗಳಿದ್ದರೂ, ದಾಖಲೆಗಳಿದ್ದರೂ ನಿಮ್ಮ ಈ ಮೌನದ ಹಿಂದಿನ ರಹಸ್ಯವೇನು? ನಿಮ್ಮ ಮೂಗಿನ ನೇರಕ್ಕೇ ಇಷ್ಟು ದೊಡ್ಡ ಅಕ್ರಮ ನಡೆಯುತ್ತಿದ್ದರೂ ನೀವು ಯಾಕೆ ಮೌನವಾಗಿದ್ದೀರಿ? ಈ ಲೂಟಿಯಲ್ಲಿ ನಿಮ್ಮ ಪಾಲೆಷ್ಟು ಎಂಬ ಅನುಮಾನ ಜನಸಾಮಾನ್ಯರನ್ನು ಕಾಡುತ್ತಿದೆ. ಬಾರ್, ಪಬ್, ಕ್ಲಬ್‌ಗಳಿಂದ ‘ಮಂಥ್ಲಿ ಮನಿ’ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಲು ನಿಮಗಿರುವ ಅಡ್ಡಿಯಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

ಇಷ್ಟೇ ಅಲ್ಲದೆ ದಿವಾಳಿ ಆಗಿರುವ ಸರ್ಕಾರದ ಖಜಾನೆ ತುಂಬಿಸಲು ರಾಜ್ಯದಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯಲು ಅವಕಾಶ ನೀಡಲಾಗಿದೆ. ಈ ಸರ್ಕಾರದ ಹಣದ ದಾಹಕ್ಕೆ ರಾಜ್ಯದ ಯುವಜನತೆಯ ಭವಿಷ್ಯ ಬಲಿಯಾಗುತ್ತಿದೆ. ಹಳ್ಳಿ ಹಳ್ಳಿಗಳಲ್ಲಿ ಮದ್ಯದ ದಂಧೆ ಹರಡುತ್ತಿದ್ದು, ಸಣ್ಣ ಮಕ್ಕಳು ಮತ್ತು ವಿದ್ಯಾರ್ಥಿಗಳು ಕುಡಿತದ ದಾಸರಾಗುತ್ತಿದ್ದಾರೆ. ಮದ್ಯಪಾನದ ಮದದಿಂದ ಸಂಭವಿಸುತ್ತಿರುವ ಅಪಘಾತಗಳು ಕುಟುಂಬಗಳನ್ನು ಬೀದಿಗೆ ತಳ್ಳುತ್ತಿವೆ. ಇಷ್ಟೆಲ್ಲಾ ಅವಾಂತರಗಳು ಸಂಭವಿಸುತ್ತಿದ್ದರೂ, ಅಬಕಾರಿ ಇಲಾಖೆಯ ಅಧಿಕಾರಿಗಳು ಕೇವಲ ವಸೂಲಿಯಲ್ಲೇ ಮಗ್ನರಾಗಿದ್ದಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಸರ್ಕಾರ ಕೂಡಲೇ ಎಚ್ಚೆತ್ತು ಸಚಿವ ತಿಮ್ಮಾಪುರ ಅವರ ರಾಜೀನಾಮೆ ಪಡೆದು ಸಮಗ್ರ ತನಿಖೆಗೆ ಆದೇಶಿಸಬೇಕು. ಭ್ರಷ್ಟರನ್ನು ರಕ್ಷಿಸುವುದೇ ನಿಮ್ಮ ಗುರಿಯಾಗಿದ್ದರೆ, ಜನರೇ ನಿಮಗೆ ತಕ್ಕ ಪಾಠ ಕಲಿಸುತ್ತಾರೆ. ಸುಧಾರಿಸಿಕೊಳ್ಳಿ, ಇಲ್ಲವೇ ಕುರ್ಚಿ ಬಿಟ್ಟು ತೊಲಗಿ ಎಂದು ಆಗ್ರಹಿಸಿದ್ದಾರೆ.

  • Excise department

Related News

Politics

ವಿಧಾನಮಂಡಲ ವಿಶೇಷ ಅಧಿವೇಶನ: ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

Saturday, 25 Jul, 2026
Politics

ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

Saturday, 25 Jul, 2026
Politics

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್

Saturday, 25 Jul, 2026
--UNESCO--------
Politics

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್

----------
Politics

ಅಬಕಾರಿ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬ್ರಹ್ಮಾಂಡ ಭ್ರಷ್ಟಾಚಾರ! ಆರ್. ಅಶೋಕ್ ಕಿಡಿ

-------
Politics

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

Comment As:
  • Sign in
  • Sign up

Comment (0)

  • LATEST NEWS
  • MOST POPULAR

Politics

ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ; ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ, ಬಿಜೆಪಿ ಕಿಡಿ

Wednesday, 21 Jan, 2026
Politics

ವಿಧಾನಮಂಡಲ ವಿಶೇಷ ಅಧಿವೇಶನ: ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

Wednesday, 21 Jan, 2026
Politics

ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

Wednesday, 21 Jan, 2026
Politics

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್

Monday, 19 Jan, 2026
Politics

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

Tuesday, 20 Jan, 2026
Politics

ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

Wednesday, 21 Jan, 2026

- Archive -
#129, Near Ganesh Temple, Kalmeshwar Road, Vadgaon, Belagavi - 590 005 Mobile: 9110442126 Email: aadisysbgm@gmail.com | #129, ಗಣೇಶ ದೇವಸ್ಥಾನದ ಹತ್ತಿರ, ಕಲ್ಮೇಶ್ವರ ರಸ್ತೆ, ವಡ್ಗಾಂವ್, ಬೆಳಗಾವಿ - 590 005 | Nor again is there anyone who loves or pursues or desires to obtain pain of itself, because it is pain, but because occasionally circumstances occur in which toil and pain toil and pain
Subscribe

Category

  • INTERNATIONAL TRAVEL FOOD TECHNOLOGY LIFESTYLE EDITOR CHOICE VIDEO POLITICS Crime

Populer News

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

© 2026 ಜಟಾಯು ಪತ್ರಿಕೆ. ಎಲ್ಲಾ ಹಕ್ಕುಗಳು ಕಾಯ್ದಿರಿಸಲಾಗಿದೆ.